ಮುಂಬೈ: ರಾಷ್ಟ್ರೀಯ ಖಾಸಗಿ ಸುದ್ದಿ ವಾಹಿನಿಯ ಸಂಪಾದಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್ ನ ಇಬ್ಬರು ಕಾರ್ಯಕರ್ತರು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ ಎಂದು ಸ್ವತಃ ಅರ್ನಬ್ ಗೋಸ್ವಾಮಿ ಹೇಳಿದ್ದಾರೆ.
ಈ ಘಟನೆ ಸಂಬಂಧ ಮುಂಬೈನ ಎನ್.ಎಂ ಜೋಶಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಅರ್ನಬ್ ಗೋಸ್ವಾಮಿ ಹಾಗೂ ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗ್ತಿದೆ.
ಪಾಲ್ಗರ್ ಹತ್ಯೆ ವಿಚಾರದಲ್ಲಿ ನಿನ್ನೆ ಸೋನಿಯಾ ಗಾಂಧಿ ವಿರುದ್ಧ ಅರ್ನಬ್ ಗೋಸ್ವಾಮಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಇಂದು ಮುಂಜಾನೆ ದಾಳಿ ನಡೆಸಲಾಗಿದೆ.