ಪ್ರಜಾಸ್ತ್ರ ಸುದ್ದಿ
ತುಮಕೂರು: ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಫೀಸ್ ಕಟ್ಟಿಲ್ಲ ಅನ್ನೋ ಕಾರಣಕ್ಕೆ ಪರೀಕ್ಷೆಯಿಂದ ವಂಚಿತಳಾಗಿದ್ದಾಳೆ ಅನ್ನೋದು ಬಹುತೇಕರಿಗೆ ಗೊತ್ತಾಗಿದೆ. ಈ ಬಗ್ಗೆ ಪೋಷಕರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ರು.
ಪೋಷಕರ ಪತ್ರದಿಂದಾಗಿ ಶಿಕ್ಷಣ ಸಚಿವ ಸುರೇಶಕುಮಾರ, ಕೊರಟಗೆರೆಯ ಗ್ರೀಷ್ಮಾ ಅವರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ರು. ಆಗಸ್ಟ್ ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಆಗ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು. ನಿನ್ನ ಜೊತೆ ನಾವು ಇರುತ್ತೇವೆ ಎಂದು ವಿದ್ಯಾರ್ಥಿನಿಗೆ ಶಿಕ್ಷಣ ಸಚಿವರು ಧೈರ್ಯ ತುಂಬಿದ್ರು.