ಪ್ರಜಾಸ್ತ್ರ ಸುದ್ದಿ
ಮೈಸೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಆಗಸ್ಟ್ 26ರಂದು ಮಡಿಕೇರಿ ಚಲೋ ನಡೆಸಲಾಗುತ್ತಿದೆ. ಇದನ್ನು ಹಿಂದೆ ಪಡೆಯಿರಿ ಎಂದು ಬಿಜೆಪಿ ಎಂಲ್ಸಿ ಎಚ್.ವಿಶ್ವನಾಥ್ ಮನವಿ ಮಾಡಿದ್ದಾರೆ.
ಚುನಾವಣೆ ಸಮೀಪಿಸುತ್ತಿದೆ. ಈ ಹೊತ್ತಿನಲ್ಲಿ ಏನಾದರೂ ಅನಾಹುತವಾದರೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. ಮೊಟ್ಟೆ ಎಸೆಯೋದು ಸರಿಯೆಂದು ಯಾರೂ ಹೇಳುತ್ತಿಲ್ಲ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಎಲ್ಲರೂ ಖಂಡಿಸಿದ್ದಾರೆ. ಇಷ್ಟಾದರೂ ಸಿದ್ದರಾಮಯ್ಯನವರು ಮಡಿಕೇರಿ ಚಲೋ ಎನ್ನುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡಲಿ ಎಂದರು.
ಮೊಟ್ಟೆ ವಿಚಾರ ರಾಷ್ಟ್ರೀಯ ಸುದ್ದಿಯಾಗಿದೆ. ಜನರ ಸಮಸ್ಯೆಗಳಲ್ಲಿ ಸಿಲುಕಿದ್ದಾರೆ. ನಿಮ್ಮಂತಹ ಶೋಭಾಯಮಾನ ನಾಯಕರಿಗೆ ಇದು ಸರಿಯಲ್ಲ. ಇಂದಿರಾ ಗಾಂಧಿ ಮೇಲೆ ಹಲವರು ಬಾರಿ ಅಟ್ಯಾಕ್ ಆಗಿತ್ತು. ಚಿದಂಬರಗೆ ಸುದ್ದಿಗೋಷ್ಠಿಯಲ್ಲಿ ಶೂ ತೋರಿಸಲಾಗಿತ್ತು. ಇದು ಜನಾಕ್ರೋಶದ ಉದಾಹರಣೆ. ಹಾಗಂತ ಇದನ್ನು ನಾವು ಸಮರ್ಥನೆ ಮಾಡುತ್ತಿಲ್ಲ. ಇದು ಖಂಡನೀಯ. ಪುಂಡ ಪೋಕರಿ ಮೊಟ್ಟೆ ಎಸೆದಿದ್ದು ಪ್ರತಿಷ್ಠೆಯಾಗಿ ತೆಗೆದುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.