ಪ್ರಜಾಸ್ತ್ರ ಸುದ್ದಿ
ಮುಂಬೈ: ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಉದ್ಧವ್ ಠಾಕ್ರೆ ಜೊತೆಗಿನ ಆಂತರಿಕ ಸಂಘರ್ಷದಲ್ಲಿ ಶಿಂಧೆ ಪಡೆಗೆ ಗೆಲುವಾಗಿದೆ.
ಅಲ್ದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸಹ ಸ್ವೀಕರಿಸಿದ್ದಾರೆ. ಶಿಂಧೆ ಬಣಕ್ಕೆ ಬಿಜೆಪಿ ಬೆಂಬಲ ನೀಡಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ಮಾಜಿ ಸಿಎಂ ಫಡ್ನಾವಿಸ್, ನಾನು ಸರ್ಕಾರದ ಭಾಗವಾಗುವುದಿಲ್ಲವೆಂದು ಹೇಳಿದ್ದರು. ಆದರೆ, ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
2019ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ ಸಿಪಿ ಜೊತೆಗೆ ಸರ್ಕಾರ ರಚನೆ ಮಾಡಿದ್ದವು. ಇದೀಗ ಆ ಸರ್ಕಾರವನ್ನು ಶಿವಸೇನೆ ಶಾಸಕರೆ ಬೀಳಿಸಿದ್ದು, ಅದಕ್ಕೆ ಬಿಜೆಪಿ ಬೆಂಬಲವಾಗಿ ನಿಂತಿದೆ. ಹೀಗಾಗಿ ಬುಧವಾರ ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಲೋಕನಾಥ್ ಶಿಂಧೆ ಗುರುವಾರ ಸಂಜೆ 7.30ಕ್ಕೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.