ಐದು ರಾಜ್ಯಗಳ ಚುನಾವಣೆ: ಸಂಜೆ ಬಿಜೆಪಿ ಸಭೆ

203

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮುಂಬರುವ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ಇಂದು ಚುನಾವಣೆ ಸಮಿತಿಯ ಸಭೆ ನಡೆಯಲಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಸಂಜೆ ಸಭೆ ನಡೆಯಲಿದ್ದು, ಗೆಲುವಿನ ತಂತ್ರಗಾರಿಕೆ ಕುರಿತು ಚರ್ಚೆ ನಡೆಯಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಹೊಡೆತವನ್ನು ಬಿಜೆಪಿ ಎದುರಿಸಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಮೂಲೆ ಮೂಲೆ ಸುತ್ತಿದ್ದರೂ ಬಹುಮತ ಪಡೆಯಲು ಆಗಲಿಲ್ಲ. ಹೀಗಾಗಿ ಈ ವರ್ಷಾಂತ್ಯಕ್ಕೆ ನಡೆಯಲಿರುವ ಐದು ರಾಜ್ಯಗಳ ಚುನಾವಣೆ ಸಂಬಂಧ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಹಲವು ವಿಚಾರಗಳು ಚರ್ಚೆಗೆ ಬರಲಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೇರಿ ಅನೇಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!