ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜಕೀಯ ಪಕ್ಷಗಳು ಚುನಾವಣೆ ಬಾಂಡ್ ಮೂಲಕ ದೇಣಿಗೆ ಸಂಗ್ರಹಿಸಿರುವ ಸಂಬಂಧ ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ್ ಖರ್ಗೆ ಹೇಳಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಮಧ್ಯಪ್ರವೇಶದಿಂದ ಚುನಾವಣೆ ಬಾಂಡ್ ವ್ಯವಸ್ಥೆಯನ್ನು ಬಿಜೆಪಿ ಹೇಗೆಲ್ಲ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದು ಬಯಲಿಗೆ ಬಂದಿದೆ. ಒಟ್ಟು ಖರೀದಿಯಾದ ಚುನಾವಣೆ ಬಾಂಡ್ ಗಳಲ್ಲಿ ಶೇಕಡ 50ರಷ್ಟು ಬಿಜೆಪಿಗೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಮೋದಿಯವರು ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎನ್ನುವವರೆ ತನಿಖಾ ಸಂಸ್ಥೆಗಳ ಮೂಲಕ ಬೆದರಿಕೆ ಹಾಕಿದ್ದಾರೆ. ಪದೆಪದೆ ತನಿಖೆ ಸಂಸ್ಥೆಗಳಿಂದ ದಾಳಿಗೊಳಗಾದ ಸಂಸ್ಥೆಗಳು ಬಿಜೆಪಿಗೆ ನೂರಾರು ಕೋಟಿ ರೂಪಾಯಿ ಚುನಾವಣೆ ಬಾಂಡ್ ದೇಣಿಗೆ ಕೊಟ್ಟಿವೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಶೇಕಡ 11ರಷ್ಟು ಚುನಾವಣೆ ಬಾಂಡ್ ಗಳು ಬಂದಿವೆ. ತನ್ನ ಸದಸ್ಯರಿಂದ ದೇಣಿಗೆ ಸಂಗ್ರಹಿಸಿದ್ದ 300 ಕೋಟಿ ಠೇವಣಿ ಇಟ್ಟಿದ್ದ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದೆ ರೀತಿ ಬಿಜೆಪಿ ಬ್ಯಾಂಕ್ ಖಾತೆಗಳನ್ನು ತನಿಖಾ ಸಂಸ್ಥೆಗಳು ಮುಟ್ಟುಗೋಲು ಹಾಕಿಕೊಳ್ಳಬೇಕು ಅಂತಾ ಆಗ್ರಹಿಸಿದರು.