ಪ್ರಜಾಸ್ತ್ರ ಸುದ್ದಿ
ಸತ್ಯಸಾಯಿ: ಚಲಿಸುತ್ತಿದ್ದ ಆಟೋದ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಐವರು ಸಜೀವ ದಹನವಾದ ದುರಂತ ಆಂಧ್ರದ ಸತ್ಯಸಾಯಿ ಜಿಲ್ಲೆಯ ತಾಡಿಮರ್ರಿಯಲ್ಲಿ ನಡೆದಿದೆ. ದಿನಗೂಲಿ ಕೆಲಸಕ್ಕೆ ಹೊರಟವರು ಪ್ರಾಣ ಕಳೆದುಕೊಂಡಿದ್ದಾರೆ. ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಗುಡ್ಡಂಪಲ್ಲಿಯಿಂದ ಚಿಲ್ಲಕೊಂಡಯ್ಯಪಲ್ಲಿಗೆ ಆಟೋದಲ್ಲಿ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದಿರುವುದರಿಂದ ಆಟೋಗೆ ಬೆಂಕಿ ಹತ್ತಿದೆ. ಹೀಗಾಗಿ ಐವರು ಸಜೀವ ದಹನವಾಗಿದ್ದು, ಗುರುತು ಪತ್ತೆ ಮಾಡುವುದು ಕಷ್ಟವಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.