ಪ್ರಜಾಸ್ತ್ರ ಸುದ್ದಿ
ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೇಕರಿ ಬೆಂಕಿಗಾಹುತಿ ಆಗಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ರಸ್ತೆಯಲ್ಲಿ ನಡೆದಿದೆ.
ಎಸ್ ಎಸ್ ಕಾಂಪ್ಲೆಕ್ಸ್ ನಲ್ಲಿರುವ ಅಯ್ಯಂಗಾರ ಬೇಕರಿಗೆ ಬೆಂಕಿ ಹತ್ತಿದ್ದು, ಇನ್ನು ಬೇಕರಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಲ್ಲದೇ, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಈ ಅವಘಡ ಗಾಂಧಿಚೌಕ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.