ಪ್ರಜಾಸ್ತ್ರ ಸುದ್ದಿ
ಮೈಸೂರು: ವಿದ್ಯುತ್ ದರ ಏರಿಕೆ ಸಂಬಂಧ ರಾಜ್ಯದಲ್ಲಿ ಜನರ ಆಕ್ರೋಶ ಜೋರಾಗಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿದ್ದ ಕಾಂಗ್ರೆಸ್, ಈಗ ಹಲವು ಷರತ್ತುಗಳನ್ನು ಹಾಕುತ್ತಿದೆ. ಇದರ ಜೊತೆಗೆ ದರ ಏರಿಕೆ ಮಾಡಿದೆ ಎಂದು ಸಿಡಿದೆದ್ದಿದ್ದಾರೆ. ವಿದ್ಯುತ್ ದರ ಏರಿಕೆ ಹಿಂದಿನ ಸರ್ಕಾರ ಮಾಡಿದ್ದು, ಚುನಾವಣೆ ಘೋಷಣೆಯಾಗಿದ್ದರಿಂದ ಅದನ್ನು ತಡೆ ಹಿಡಿಯಲಾಗಿತ್ತು. ಈಗ ಅದು ಜಾರಿಗೆ ಬಂದಿದೆ ಅಂತಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಘೋಷಿಸಿರುವ 5 ಗ್ಯಾರೆಂಟಿಗಳಲ್ಲಿ ಉಚಿತ ವಿದ್ಯುತ್ ಸಹ ಒಂದಾಗಿದೆ. ಹೀಗಿರುವಾಗ ವಿದ್ಯುತ್ ದರ ಏರಿಕೆ ಮಾಡಿರುವುದರಿಂದ ಯೋಜನೆ ಹಾಗೂ ಸರ್ಕಾರದ ಮೇಲೆ ವ್ಯತಿರಕ್ತ ಪರಿಣಾಮ ಬೀರುತ್ತೆ. ಜನರ ಹಿತದೃಷ್ಟಿಯಿಂದ ವಿದ್ಯುತ್ ದರ ಕಡಿಮೆ ಮಾಡಿ ಎಂದು ಪತ್ರ ಬರೆದಿದ್ದಾರೆ.