ಪ್ರಜಾಸ್ತ್ರ ಸುದ್ದಿ
ವಿಜಯಪುರ: ತೋಟದಲ್ಲಿರುವ ಬಾವಿಯ ಮೋಟಾರ್ ಆನ್ ಮಾಡಲು ಹೋದಾಗ ವಿದ್ಯುತ್ ತಗುಲಿ ಸಹೋದರಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದಿದೆ.
ಮುದ್ದುಗೌಡ ಅಪ್ಪಾಸಾಹೇಬ್ ಪಾಟೀಲ್ ಹಾಗೂ ಶಿವರಾಜ್ ಅಪ್ಪಾಸಾಹೇಬ್ ಪಾಟೀಲ್ ಸಾವನ್ನಪ್ಪಿದ ಸಹೋದರರು. ಅಣ್ಣ ಮುದ್ದುಗೌಡ ಮೋಟರ್ ಆನ್ ಮಾಡಲು ಹೋದಾಗ ವಿದ್ಯುತ್ ತಗುಲಿದೆ. ಅವನನ್ನು ಬಿಡಿಸಲು ಹೋದ ತಮ್ಮ ಶಿವರಾಜಗೂ ವಿದ್ಯುತ್ ತಗುಲಿ ಇಬ್ಬರು ಮೃತಪಟ್ಟಿದ್ದಾರೆ. ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.