ಪ್ರಜಾಸ್ತ್ರ ಸುದ್ದಿ
ಹಾಸನ: ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಮೇಲಕೆರೆ ಹತ್ತಿರ ನಡೆದಿದೆ. 50 ವರ್ಷದ ಮುಂಜುನಾಥ್ ಮೃತ ರೈತನಾಗಿದ್ದಾನೆ.
ಜಮೀನಿಗೆ ರೈತ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿ ನಡೆಸಿದೆ. ಈ ಘಟನೆ ತಿಳಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.