ಕಾಡಾನೆ ದಾಳಿಗೆ ಯುವತಿ ಬಲಿ

161

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ತಾಯಿಯೊಂದಿಗೆ ಜಮೀನಿಗೆ ಹೋಗಿ ಅವರೆಕಾಯಿ ಬಿಡಿಸುತ್ತಿದ್ದ ಯುವತಿ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿದ ಪರಿಣಾಮ ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಚನ್ನಗಿರಿ ತಾಲೂಕಿನ ಸೋಮ್ಲಾಪುರ, ಕಾಶಿಪುರ ಹತ್ತಿರ ನಡೆದಿದೆ. ಕವನ(17) ಮೃತ ಯುವತಿ ಎಂದು ತಿಳಿದು ಬಂದಿದೆ.

ಇನ್ನು ಘಟನೆಯಲ್ಲಿ ತಾಯಿ ಮಂಜುಳಾ ಸಹ ಗಾಯಗೊಂಡಿದ್ದಾರೆ. ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ನೋಡಲಾಗದು. ಇದೆ ರೀತಿ ಮತ್ತೊಂದು ಕಡೆ ಇಬ್ಬರ ಮೇಲೆ ಆನೆ ದಾಳಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮ್ಲಾಪುರ, ಕಾಶಿಪುರ, ಸೂಳೆಕೆರೆ ಸೇರಿ ಸುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಯಾರೂ ಒಂಟಿಯಾಗಿ ಓಡಾಡಬಾರದು ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.




Leave a Reply

Your email address will not be published. Required fields are marked *

error: Content is protected !!