ವಾಡಿಯಲ್ಲಿ 3 ದಿನ ನಿಷೇಧಾಜ್ಞೆ

187

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಜಿಲ್ಲೆಯ ವಾಡಿ ಪಟ್ಟಣದಲ್ಲಿ ಸೋಮವಾರ ಸಂಜೆ ನಡೆದ ಗಲಾಟೆಯಿಂದಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜನವರಿ 25ರ ಬೆಳಗ್ಗೆ 6 ಗಂಟೆಯ ತನಕ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಸೋಮವಾರ ರಾಮ ಮಂದಿದ ಉದ್ಘಾಟನೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಗಿದೆ. ಈ ವೇಳೆ ಬಸ್ ಸ್ಯ್ಟಾಂಡ್ ಹತ್ತಿರ ಮೆರವಣಿಗೆ ಬರುತ್ತಿದ್ದಂತೆ ಅಲ್ಲಿದ್ದ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಸೇರಿ ರೆಸ್ಟೋರೆಂಟ್ ಮುಚ್ಚದ್ದಕ್ಕೆ ಆಕ್ಷೇಪ ತೆಗೆದು ಗಲಾಟೆ ಮಾಡಲಾಗಿದೆ. ಆಗ ಎರಡು ಸಮುದಾಯಗಳ ನಡುವೆ ಗಲಾಟೆ ಜೋರಾಗಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಸೋಮವಾರ ತಡರಾತ್ರಿ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹೀಗಾಗಿ ನಿಷೇಧಾಜ್ಞೆ ಜಾರಿ ಮಾಡಿ ವ್ಯಾಪಾರ, ವಹಿವಾಟುಗಳಿಗೆ ನಿರ್ಬಂಧ ವಿಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!