ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಈಶ್ವರಪ್ಪ ಡಿಮ್ಯಾಂಡ್

91

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಮಗನಿಗೆ ಟಿಕೆಟ್ ಸಿಗದೆ ಇರುವುದಕ್ಕೆ ಬಂಡಾಯದ ಬಾವುಟ ಹಾರಿಸಿರುವ ಬಿಜೆಪಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಫೋನ್ ಮಾಡಿ ಬುಧವಾರ ದೆಹಲಿಗೆ ಬರಲು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಬೇಡ ಎಂದು ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲು ಮಾಡಿ ನಾಳೆಯೇ ಕಣದಿಂದ ಹಿಂದೆ ಸರಿಯುತ್ತೇನೆ ಎನ್ನುವ ಬೇಡಿಕೆ ಇಟ್ಟಿರುವುದಾಗಿ. ದೆಹಲಿಗೆ ಹೋದ್ಮೇಲೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಸೂಚಿಸುವಂತೆ ಇಲ್ಲವೆಂದು ಹೇಳಿದ್ದೇನೆ ಎಂದರು.

ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಅದು ಮುಕ್ತಿಗೊಳಿಸಬೇಕು. ಅಪ್ಪ ಮಕ್ಕಳ ಕೈಯಲ್ಲಿ ಪಕ್ಷ ಹೋಗಿರುವುದು ಅಪಾಯ. ಹಿಂದುಳಿದವರಿಗೆ ಟಿಕೆಟ್ ಕೊಡಲು ಆಗುತ್ತಿಲ್ಲ. ಯಾಕೆ ಮೋಸ ಮಾಡುತ್ತಿದ್ದೀರಿ ಎಂದು ಅಮಿತ್ ಶಾರನ್ನು ಕೇಳಿದ್ದೇನೆ. ದೊಡ್ಡವರು ಕರೆದಾಗ ದೆಹಲಿಗೆ ಹೋಗದೆ ಇರಲು ಆಗಲ್ಲ. ಹೀಗಾಗಿ ಹೊರಟಿದ್ದೇನೆ ಅಂತಾ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!