ಬಚ್ಚಲುಬಾಯಿ ಈಶ್ವರಪ್ಪ ವಜಾ ಮಾಡಿ: ಡಿ.ಕೆ ಶಿವಕುಮಾರ್

530

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿದೆ. ಸದನದಲ್ಲಿ ನಿನ್ನೆಯಿಂದ ಧರಣಿ ನಡೆಸಿದ್ದು, ಬಚ್ಚಲುಬಾಯಿ ಈಶ್ವರಪ್ಪ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ರಾಜೀನಾಮೆ ಅನ್ನೋದು ಗೌರವಯುತ ಪದ. ನಾವು ರಾಜೀನಾಮೆ ಕೇಳುತ್ತಿಲ್ಲ. ಸಿಎಂ ಹಾಗೂ ರಾಜ್ಯಪಾಲರನ್ನು ಅವರನ್ನು ವಜಾ ಮಾಡಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಂದು ಧರಣಿ ಮುಂದುವರೆಯಲಿದೆ. ಸೋಮವಾರದಿಂದ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರಧ್ವಜ ಹಿಡಿದು ಹೋರಟ ನಡೆಸಲಾಗುವುದು ಎಂದು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!