ನೈತಿಕ ಪೊಲೀಸಗಿರಿ ತಡೆಯಲು ಆ್ಯಂಟಿ ಕಮ್ಯೂನಲ್ ವಿಂಗ್: ಪರಮೇಶ್ವರ್

149

ಪ್ರಜಾಸ್ತ್ರ ಸುದ್ದಿ

ಮಂಗಳೂರು: ನಗರದಲ್ಲಿ ನೈತಿಕ ಪೊಲೀಸಗಿರಿ ತಡೆಯಲು ಆ್ಯಂಟಿ ಕಮ್ಯೂನಲ್ ವಿಂಗ್ ರಚನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಪಶ್ಚಿಮ ವಲಯ ಐಜಿಪಿ ವ್ಯಾಪ್ತಿಯ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಇಂದು ಭಯದ ವಾತಾವರಣವಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ನೈತಿಕ ಪೊಲೀಸಗಿರಿ ಇಲ್ಲಿ ತುಂಬಾ ನಡೆಯುತ್ತಿದೆ. ಇದರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೋಮುಸೌಹಾರ್ದತೆ ತರಲು ಪೊಲೀಸರಿಗೆ ಸೂನೆ ನೀಡಲಾಗಿದೆ ಎಂದರು.

ಕರಾವಳಿ ಭಾಗದ ಜನರೂ ಒಳ್ಳೆಯವರಿದ್ದಾರೆ. ಇದರ ಜೊತೆಗೆ ಶಾಂತಿ ಇಲ್ಲ. ಕೋಮುಸಾಮರಸ್ಯ ಇಲ್ಲ ಅನ್ನೋ ಮಾತು ಇದೆ. ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ 20 ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದೆ. ಎಲ್ಲರೂ ಇಲ್ಲಿ ಶಾಂತಿ ನೆಲೆಸುವಂತೆ ಮಾಡಿ ಎಂದಿದ್ದರು. ಸಧ್ಯ ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಈ ವಿಂಗ್ ಸ್ಥಾಪನೆ ಮಾಡುತ್ತಿದ್ದೇವೆ. ಮುಂದೆ ಎಲ್ಲೆಲ್ಲಿ ಅವಶ್ಯಕತೆ ಇರುತ್ತದೆಯೋ ಅಲ್ಲೆಲ್ಲ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!