ವೈದ್ಯರ ನಿರ್ಲಕ್ಷ್ಯಕ್ಕೆ ಎತ್ತು ಸಾವು?

263

ಪ್ರಜಾಸ್ತ್ರ ಸುದ್ದಿ

ವಿಜಯಪುರ: ವೈದ್ಯರ ನಿರ್ಲಕ್ಷ್ಯದಿಂದ ಎತ್ತೊಂದು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದಿದೆ. ಸಾಸಾಬಾಳ ನಿವಾಸಿ ಗೊಲ್ಲಾಳಪ್ಪ ಸಿದ್ದಪ್ಪ ಪಟ್ಟಣದ ಎಂಬುವರಿಗೆ ಸೇರಿದ ಎತ್ತು ಸಾವನ್ನಪ್ಪಿದೆ.

ಗೊಲ್ಲಾಳಪ್ಪನಿಗೆ ಈ ಎತ್ತೇ ಕುಟುಂಬ ನಿರ್ವಹಣೆಗೆ ಆಧಾರವಾಗಿತ್ತು. ಆದರೆ, ಸರಿಯಾದ ಸಮಯಕ್ಕೆ ಗೋಲಗೇರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೇ, ಹಣ ನೀಡಿದ್ರೇ ಮಾತ್ರ ಪ್ರಾಣಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಾರೆ ಅನ್ನೋ ಆರೋಪಿಗಳು ಸಹ ಕೇಳಿಬಂದಿವೆ. ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




Leave a Reply

Your email address will not be published. Required fields are marked *

error: Content is protected !!