ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಲೇಷ್ಯಾ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಸಚಿವ, ಎಐಡಿಎಂಕೆ ಮುಖಂಡ ಎಂ.ಮಣಿಕಂಠನ್ ಅವರನ್ನ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಮದ್ರಾಸ್ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಅಂದಿನಿಂದಲೂ ಇವರು ತಲೆ ಮರೆಸಿಕೊಂಡಿದ್ದರು. ಇದೀಗ ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಎಂ.ಮಣಿಕಂಠನ್ ಅವರನ್ನ ಬಂಧಿಸಿದೆ.