ಪ್ರಜಾಸ್ತ್ರ ಸುದ್ದಿ
ಹಾವೇರಿ: ಹಿಂದಿನ ಸರ್ಕಾರದ ವಿರುದ್ಧ ಕೇಳಿ ಬಂದಿದ್ದ ಶೇಕಡ 40ರಷ್ಟು ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ಧ ಹೈಕೋರ್ಟ್ 6 ವಾರದ ಗಡುವು ನೀಡಿದೆ. ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಿ ಎಂದು ಮಾಜಿ ಸಿಎಂ, ಶಾಸಕ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಹಣ ಇಲ್ಲಿದಿರುವುದು ಕೋರ್ಟ್ ಗೂ ಸಹ ಗೊತ್ತಾಗಿದೆ. ಈ ರೀತಿ ಕಾಲಹರಣ ಮಾಡದೆ 6 ವಾರದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಇಲ್ಲದೆ ಹೋದರೆ ಹಣ ಬಿಡುಗಡೆಗೆ ನಾವೇ ನಿರ್ದೇಶನ ಮಾಡಬೇಕಾಗುತ್ತೆ ಎಂದು ಹೇಳಿದೆ ಅಂತಾ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಎಲ್ಲವನ್ನೂ ಪೂರ್ತಿಯಾಗಿ ನಿಲ್ಲಿಸಲಾಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಸರ್ಕಾರದ ಒತ್ತಡವಿದೆ. ಹೀಗಾಗಿ ಅವರ ಪರ ಮಾತನಾಡುತ್ತಿದ್ದಾರೆ ಅಂತಾ ಆರೋಪಿಸಿದರು.