ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಇಂದು 80ರ ಸಂಭ್ರಮ. ಅವರ ಅಭಿಮಾನಿಗಳು, ಬೆಂಬಲಿಗರು, ಕಾರ್ಯಕರ್ತರು, ಬಿಜೆಪಿ ಮುಖಂಡರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಇದರ ನಡುವೆ ಇವರ ಪುತ್ರಿ ಅರುಣಾದೇವಿ ಡೈರಿ ಬಾಂಬ್ ಸಿಡಿಸಿದ್ದಾರೆ.
ಹೌದು, ಡಿನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಡೈರಿಯೊಂದನ್ನು ಬರೆದಿದ್ದಾರಂತೆ. ಈ ಬಗ್ಗೆ ಮಾತನಾಡಿದ ಅರುಣಾದೇವಿ, ಜೈಲಿನಲ್ಲಿದ್ದಾಗ ನಮ್ಮ ತಂದೆ ಡೈರಿ ಬರೆದಿದ್ದಾರೆ. ಪ್ರತಿಯೊಂದು ಘಟನೆಯನ್ನು ಬರೆದಿದ್ದಾರೆ. ಸರಿಯಾದ ಸಂದರ್ಭದಲ್ಲಿ ಹೊರ ಬರುತ್ತೆ. ನಮ್ಮ ತಂದೆ ಜೈಲಿಗೆ ಹೋಗಿದ್ದು ಕರಾಳದಿನಗಳು. ಕುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳನ್ನು ಮಾಡಿದ್ದರು. ಆ ವೇಳೆ ರಾಜಕೀಯ ಅಸಹ್ಯ ಎನಿಸಿತು ಎನ್ನುವ ಮೂಲಕ ಡೈರಿ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.
ಇನ್ನು ಶಿವಮೊಗ್ಗದಲ್ಲಿ ಏರ್ ಪೋರ್ಟ್ ನಿರ್ಮಿಸಬೇಕು ಅನ್ನೋದು ಅವರ ಕನಸಾಗಿತ್ತು. ಅದು ಇಂದು ನನಸಾಗಿದೆ. ಪ್ರಧಾನಿ ಮೋದಿ ಅದನ್ನು ಉದ್ಘಾಟನೆ ಮಾಡುತ್ತಿರುವುದು ಸೌಭಾಗ್ಯ ಎಂದು ಪುತ್ರ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.