ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಯಡಿಯೂರಪ್ಪನವರನ್ನು ಕರೆದುಕೊಂಡು ಓಡಾಡಿದರೆ ಚುನಾವಣೆಯಲ್ಲಿ ಲಗಾಟಿ ಹೊಡೆಯುತ್ತೀರಿ ಎಂದು ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯಂಗ್ಯವಾಡಿದ್ದಾರೆ. ಮೂಡಲಗಿಯ ಕಲ್ಲೋಳಿಯಲ್ಲಿ 2ಎ ಮೀಸಲಾತಿ ಸಂಬಂಧ ಪಂಚಮಸಾಲಿ ಸಮಾವೇಶದಲ್ಲಿ ಈ ರೀತಿ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರ ಹೆಸರನ್ನು ತೆಗೆದುಕೊಳ್ಳದೆ, ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪನವರ ಜೊತೆ ಹೋದರೆ ಬಿಜೆಪಿ ಲಗಾಟಿ ಹೊಡೆಸುತ್ತೀರಿ. ನೀವು ಲಾಗ ಹಾಕ್ತೀರಿ ಎಂದು ಕಾಲೆಳೆದಿದ್ದಾರೆ. ಈ ಮೂಲಕ ಯಡಿಯೂರಪ್ಪ ವಿರುದ್ಧದ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.