ಪ್ರಜಾಸ್ತ್ರ ಸುದ್ದಿ
ತುಮಕೂರು: ಇಲ್ಲಿನ ಕೆಎಸ್ಎಫ್ ಸಿ ಆವರಣದಲ್ಲಿ ಕೈಗಾರಿಕೋದ್ಯಮಿಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂವಾದ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದು ಸತ್ತಂತಿದೆ. ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ವಿದ್ಯುತ್ ಸಮಸ್ಯೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೈಗಾರಿಕೋದ್ಯಮಗಳು ಮುಚ್ಚುವ ಸ್ಥಿತಿ ಬಂದಿದೆ. ಮತ್ತೊಂದು ಕಡೆ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ಕೇಂದ್ರ ತಂಡ ಬರ ಅಧ್ಯಯನ ನಡೆಸಿದೆ. ಕೇಂದ್ರದಿಂದ ಪರಿಹಾರ ಬಂದೇ ಬರುತ್ತೆ. ನಾವು ಅಧಿಕಾರದಲ್ಲಿದ್ದಾಗ ಮೊದಲು ಪರಿಹಾರ ಕೊಟ್ಟು ಕೇಂದ್ರದಿಂದ ಬಂದ ಬಳಿಕ ಸರಿದುಗಿಸಿಕೊಳ್ಳುತ್ತಿದ್ದೇವು. ಈಗಿನ ಸರ್ಕಾರ ಇದನ್ನು ಮಾಡುತ್ತಿಲ್ಲವೆಂದು ವಾಗ್ದಾಳಿ ನಡೆಸಿದರು.