ಪ್ರಜಾಸ್ತ್ರ ಸುದ್ದಿ
ಬೀದರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗುಪ್ತಚರ ಇಲಾಖೆ ವಿಫಲವಾಗಿದೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲವೆಂದು ಜನರು ಹೇಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಕೇಶವಕೃಪಾ, ಬಸವಕೃಪಾ ನಡುವೆ ಹೊಡೆದಾಟ ಶುರುವಾಗಿದೆ. ಬಿಜೆಪಿಯೊಳಗೆ ಯಡಿಯೂರಪ್ಪ, ಬೊಮ್ಮಾಯಿ ಅವರನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂದರು. ಇನ್ನು ಸಿಎಂ ಬೊಮ್ಮಾಯಿ ಇರುವಾಗಲೇ ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಕೊಲೆಯಾಗಿದೆ. ಆತನ ಕುಟುಂಬವನ್ನು ಭೇಟಿ ಮಾಡುವ ಕನಿಷ್ಠ ಸೌಜನ್ಯ ಬೇಡವೇ ಎಂದು ಪ್ರಶ್ನಿಸಿದ್ದಾರೆ.