ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ!

298

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಮೊಮ್ಮಗಳು 30 ವರ್ಷದ ಡಾ.ಸೌಂದರ್ಯ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿ.ಎಸ್ ಯಡಿಯೂರಪ್ಪ ಅವರ ಮಗಳು ಪದ್ಮಾವತಿ ಪುತ್ರಿ ಡಾ.ಸೌಂದರ್ಯ, ಮೌಂಟ್ ಕಾರ್ನಲ್ ಕಾಲೇಜು ಹತ್ತಿರ ಇರುವ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದರ ಬಗ್ಗೆ ಸ್ಪಷ್ಟತೆ ಇಲ್ಲ.

2018ರಲ್ಲಿ ಡಾ.ನೀರಜ್ ಅವರ ಜೊತೆಗೆ ಡಾ.ಸೌಂದರ್ಯ ಮದುವೆಯಾಗಿದ್ದರು. ಮೂರು ತಿಂಗಳ ಹಿಂದೆಯಷ್ಟೇ ಮಗುವಿಗೆ ನಾಮಕರಣ ಮಾಡಲಾಗಿತ್ತು. ರಾಮಯ್ಯ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯ ಮರಿಸ್ವಾಮಿ ಅವರ ಅಣ್ಣನ ಮಗನ ಜೊತೆಗೆ ಡಾ.ಸೌಂದರ್ಯ ಮದುವೆ ಮಾಡಿಕೊಡಲಾಗಿತ್ತು. ಪತಿ ಆಸ್ಪತ್ರೆಗೆ ತೆರಳಿದ ನಂತರ ಮನೆಯಲ್ಲಿ ನೇಣು ಹಾಕಿಕೊಂಡು ಡಾ.ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಮುಗಿದೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!