ಸಿಎಂ ಸಿದ್ದರಾಮಯ್ಯ ಹೊಗಳಿದ ಕುಮಾರಸ್ವಾಮಿ

170

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಇಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದಿದ್ದಾರೆ.

ಇಷ್ಟಕ್ಕೂ ಕುಮಾರಸ್ವಾಮಿ ಸಿಎಂ ಪರ ಬ್ಯಾಟ್ ಬೀಸಲು ಕಾರಣ ರೈತ ಸಾಂತ್ವಾನ ಯಾತ್ರೆಯನ್ನು ಸ್ವಾಗತ ಮಾಡಿರುವುದು. ರೈತ ಸಾಂತ್ವಾನದ ಯಾತ್ರೆಯ ಅನುಭವವನ್ನು ಪ್ರಧಾನಿ ಜೊತೆಗೆ ಹಂಚಿಕೊಳ್ಳುತ್ತೇನೆ ಎನ್ನುವುದರ ಜೊತೆಗೆ ಹಲವು ಪ್ರಶ್ನೆಗಳನ್ನು ಕೇಳಿದ್ದರು. ಇದನ್ನು ಸ್ವಾಗತ ಮಾಡಿ ಸಿಎಂ ಪೋಸ್ಟ್ ಮಾಡಿದ್ದರು.

ಸೋಮವಾರ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲತೆಗೆ ಆಭಾರಿ. ರೈತ ಸಾಂತ್ವಾನ ಯಾತ್ರೆ ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ನಲ್ಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ. ಬಹಳ ಸಂತೋಷ ಎಂದು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!