ಉತ್ತರ ಕರ್ನಾಟಕದಿಂದ ಸಿದ್ದರಾಮಯ್ಯ ಬಸ್ ಯಾತ್ರೆ!

143

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ತಯಾರಿ ಜೋರಾಗಿದೆ. ರ್ಯಾಲಿ, ಸಮಾವೇಶ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಜನವರಿ 3ರಿಂದ ರಾಜ್ಯದಲ್ಲಿ ಬಸ್ ಯಾತ್ರೆ ನಡೆಸಲು ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಶರಣರ ನಾಡು ಬಸವಕಲ್ಯಾಣದ ಮೂಲಕ ಬಸ್ ಯಾತ್ರೆ ಪ್ರಾರಂಭಿಸುವುದರೊಂದಿಗೆ ಉತ್ತರ ಕರ್ನಾಟಕದ 10-12 ಜಿಲ್ಲೆಗಳಲ್ಲಿ ಸಂಚರಸಲಿದ್ದಾರಂತೆ. ಅತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದಕ್ಷಿಣದಿಂದ ಯಾತ್ರೆ ಶುರು ಮಾಡುತ್ತಾರಂತೆ. ಒಟ್ಟಿನಲ್ಲಿ ಕೈ ನಾಯಕರು 224 ಮತಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿ ಸ್ಪಷ್ಟ ಬಹುಮತದ ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಆಡಳಿತದ ಚುಕ್ಕಾಣಿ ಹಿಡಿಯಲು ಲೆಕ್ಕಾಚಾರ ಹಾಕಿದ್ದಾರೆ.




Leave a Reply

Your email address will not be published. Required fields are marked *

error: Content is protected !!