ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರದಿಂದ ಅನುದಾನ ತರಲು ಆಗುವುದಿಲ್ಲ. ಮೋದಿ ಮುಂದೆ ನಾಯಿ ತರ ಇರ್ತಾರೆ ಎಂದಿದ್ದರು.
ಇದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ನಾಯಿ ನಿಯತ್ತಿನ ಪ್ರಾಣಿ. ನಾನು ನಿಯತ್ತಿನಿಂದ ಸರ್ಕಾರ ನಡೆಸುತ್ತೇನೆ ಎಂದಿದ್ದರು. ಇದೀಗ ಸಿದ್ದರಾಮಯ್ಯ ಟ್ವೀಟ್ ಮೂಲಕ ತಮ್ಮ ಮಾತಿಗೆ ಸಮಜಾಯಿಷಿ ನೀಡಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು. ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ಮಂದಿ ಮಾಗದರು ಅವರನ್ನು ಓಲೈಸಲಕ್ಕಾಗಿ ಖಂಡಿಸಿ ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿ ಅವರು ಜಾಗರೂಕರಾಗಿರುವುದು ಒಳ್ಳೆಯದು ಎಂದಿದ್ದಾರೆ.