ಹುಬ್ಬಳ್ಳಿ: ಬಿಎಸ್ ವೈ ಸರ್ಕಾರ ಬಹಳ ದಿನ ಇರುತ್ತೆ ಅಂತ ಯಾರಿಗೂ ನಂಬಿಕೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳ ಪ್ರವಾಸದಲ್ಲಿರುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತ್ನಾಡಿ ಈ ರೀತಿ ಹೇಳಿದ್ದಾರೆ.
ರೆಬಲ್ಸ್ ಗಳನ್ನಿಟ್ಟುಕೊಂಡು ಸರ್ಕಾರ ಮುನ್ನೆಡೆ ಸೋಕ್ಕಾಗುತ್ತಾ. ಹಾಲು ಕುಡಿದ ಮಕ್ಕಳೆ ಬದುಕಲ್ಲ, ಇನ್ನು ವಿಷ ಕುಡಿದವರು ಬದಕ್ತಾರಾ ಎಂದು ದನಕಾಯೋನ ಸಿನ್ಮಾ ಸ್ಟೈಲ್ ನಲ್ಲಿ ಮಾಜಿ ಸಿಎಂ ಹೇಳಿದ್ದಾರೆ. ದೇವೇಗೌಡರ ಕುಟುಂಬದ ಆರೋಪದ ಬಗ್ಗೆ ನಾನು ಸುಧೀರ್ಘವಾಗಿ ಉತ್ತರ ಕೊಟ್ಟಿದ್ದನೆ. ಬೈರತಿ,ಸೋಮಶೇಖರ್ ರನ್ನ ನಾನು ಮುಂಬೈಗೆ ಕಳುಸಿದ್ದನೆ ಅಂತಾರೆ. ಹಾಗಾದ್ರೆ ವಿಶ್ವನಾಥ, ನಾರಯಣಗೌಡ,ಗೋಪಾಲಯ್ಯರನ್ನ ಕಳಹುಸಿದ್ದು ಯಾರು ಅಂತಾ ಕೇಳಿದ್ರು.
ಹೆಚ್ ಡಿಕೆ, ಹೆಚ್ ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಸಚಿವರು ನೆರೆ ಪೀಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು. ಆದ್ರೆ ದೆಹಲಿ-ಬೆಂಗಳೂರು-ದೆಹಲಿ ಮಧ್ಯೆ ಟೂರ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು. ಭಾರಿ ಪ್ರಮಾಣದಲ್ಲಿ ನೆರೆ ಹಾನಿಯಾದ್ರು ಕೇಂದ್ರದಿಂದ ಸೂಕ್ತ ಪರಿಹಾರ ತರುವಲ್ಲಿ ಸರ್ಕಾರ ಕೆಲಸ ಮಾಡಿಲ್ಲ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ. ಇವತ್ತು ಗುಲಾಂ ನಬಿ ಅಜಾದ್ ಬರ್ತಾರೆ ಅಂತ ಕೇಳಿದ್ದಿನಿ. ಆದ್ರೆ ನೆರೆ ಪಿಡಿತ ಪ್ರದೇಶಗಳ ಪ್ರವಾಸದಲ್ಲಿದ್ದನೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.