ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಆಗಿದ್ದ ರೇಖಾ ಕದಿರೇಶ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನ ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಸಹಕಾರ ಹಾಗೂ ಸಂಚು ರೂಪಿಸಿದ ಆರೋಪದಡಿಯಲ್ಲಿ ಕಾಟನ್ ಪೇಟೆ ಪೊಲೀಸರು ನಾಲ್ವರನ್ನ ವಶಕ್ಕೆ ಪಡೆದಿದ್ದಾರೆ.
ರೇಖಾ ಪತಿ ಕದಿರೇಶ ಸಾವಿನ ಬಳಿಕ ಕುಟುಂಬದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿದ್ವು ಅಂತೆ. ಕದಿರೇಶ ಸಂಪಾದನೆ, ರಾಜಕೀಯ ಪ್ರಾಬಲ್ಯ ಎಲ್ಲವೂ ರೇಖಾಳಗೆ ಸಿಕ್ಕಿದ್ದು, ಕುಟುಂಬದಲ್ಲಿ ಸಾಕಷ್ಟು ಕಲಹಕ್ಕೆ ಕಾರಣವಾಗಿದ್ದು, ಅದುವೇ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.