ಪ್ರಜಾಸ್ತ್ರ ಸುದ್ದಿ
ವಿಜಯಪುರ: ರಾಮ ಮಂದಿರ ವಿಚಾರವಾಗಿ ಕಾಂಗ್ರೆಸ್ ಮಾಜಿ ಸಚಿವ ಹೆಚ್.ಆಂಜನೇಯ ನೀಡಿರುವ ಹೇಳಿಕೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದ್ದಾರೆ. ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ಪೂಜಾ ಕೈಂಕರ್ಯಗಳು ನಡೆಯಲಿ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ.
ಇಂತಹ ಅವಿವೇಕಿಗಳು ಸ್ವಪಕ್ಷಪಾತಿಗಳು. ಹಿಂದೂ ವಿರೋಧಿಗಳು. ರಾಜ್ಯದ ಸಚಿವರಾಗಿದ್ದರು ಎಂಬುವುದು ದೌರ್ಭಾಗ್ಯ. ಹಿಂದೂಗಳ ಆರಾಧ್ಯ ದೈವಿ ಶ್ರೀರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ.