ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಸಂಬಂಧ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರಗೊಂಡ ಬೆನ್ನಲ್ಲೇ ಹೆಚ್.ಡಿ ರೇವಣ್ಣ ಬಂಧನವಾಗಿದೆ.
ಪದ್ಮನಾಭ ನಗರದಲ್ಲಿರುವ ತಂದೆ ಹೆಚ್.ಡಿ ದೇವೇಗೌಡರ ಮನೆಯಲ್ಲಿದ್ದ ಹೆಚ್.ಡಿ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮನೆಯಿಂದ ಅವರನ್ನು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಅವರನ್ನು ಮೊದಲು ಕೋರ್ಟ್ ಮುಂದೆ ಹಾಜರು ಪಡಿಸುವ ಸಾಧ್ಯತೆಯಿದೆ.