ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಬಿಜೆಪಿ ಹಾಗೂ ಜೆಡಿಎಸ್ ನ ಕೆಲ ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನೋ ವಿಚಾರ ಸಂಬಂಧ, ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಿಮಗೆ ಒಂದು ತಿಂಗಳು ಸಮಯ ಕೊಡುತ್ತೆ. ಒಬ್ಬ ಬಿಜೆಪಿ ಶಾಸಕನನ್ನ ಕರೆದೊಯ್ಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಗೆ ಅಷ್ಟು ಜನ ಬರುತ್ತಾರೆ. ಇಷ್ಟು ಜನ ಬರುತ್ತಾರೆ ಎಂದು ಹೇಳುತ್ತಲೇ ಇದ್ದಾರೆ. ಇವರ ಯೋಗ್ಯತೆಗೆ ಒಬ್ಬರನ್ನು ಕರೆದೊಯ್ಯಲು ಆಗಿಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರವೇ ಇರಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಬಿಟ್ಟು ಹೋಗಿರುವ ಶಾಸಕರನ್ನು ಸೂರ್ಯ ಚಂದ್ರ ಇರವವರೆಗೂ ವಾಪಸ್ ಸೇರಿಸಿಕೊಳ್ಳುವುದಿಲ್ಲ ಎಂದಿದ್ದ ಸಿದ್ದರಾಮಯ್ಯನವರು, ಈಗ ಯಾಕೆ ಬಿಜೆಪಿ ಶಾಸಕರ ಮನೆ ಕಾಯುತ್ತಿದ್ದಾರೆ ಅಂತಾ ಪ್ರಶ್ನಿಸಿದರು.