ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ವಿತ್ ಸಚಿವ ಪಿ.ಚಿದಂಬರಂ ಅವರಿಗೆ ಬಂಧನ ಭೀತಿ ಎದುರಾಗಿದೆ. ಬಂಧನದಿಂದ ಪಾರಾಗಲು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇದರ ನಡುವೆ ಇಡಿ ಅವರಿಂದ ಚಿದಂಬರಂಗೆ ಲುಕ್ ಔಟ್ ನೋಟಿಸ್ ನೀಡಿಲಾಗಿದೆ. ಹೀಗಾಗಿ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಚಿದಂಬರಂ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ರು.
ಇತ್ತ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ವಕೀಲರಾದ ಕಪಿಲ ಸಿಬಲ್, ಸಲ್ಮಾನ ಖುರ್ಶಿದ, ವಿವೇಕ ಟಂಕಾ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿಯನ್ನ ನ್ಯಾಯಮೂರ್ತಿ ರಮಣ ಅವರು ಕೈಗೆತ್ತಿಕೊಂಡರು. ಆದ್ರೆ, ರಕ್ಷಣೆ ಕೋರಿ ಚಿದಂಬರಂ ಸಲ್ಲಿಸಿರುವ ಅರ್ಜಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಒಂದು ಪ್ರಮುಖ ಕೇಸ್ ಆಗಿದ್ದು ರಕ್ಷಣೆ ನೀಡಬಾರದೆಂದು ಕೋರಿದೆ. ಹೀಗಾಗಿ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿಗಳೆದರು ಸಲ್ಲಿಸುವಂತೆ ಸೂಚಿಸಲಾಗಿದೆ.