ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಅಥಣಿಯಿಂದ ಬರುವಾಗ ಮಾಜಿ ಸಚಿವ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಾರಿನಲ್ಲಿ ನಾಲ್ವರಿದ್ದರು. ಸಣ್ಣಪುಟ್ಟ ಗಾಯಗಳಾಗಿವೆ.
ಚಾಲಕನ ನಿಯಂತ್ರಣ ತಪ್ಪಿ ಹಾರೆಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಪಲ್ಟಿಯಾಗಿದೆ. ದೊಡ್ಡ ಅನಾಹುತವೊಂದು ತಪ್ಪಿದೆ. ಸ್ಥಳೀಯ ನೆರವಿನಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ.