ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಬಿಜೆಪಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಾಂಗ್ರೆಸ್ ಸೇರುತ್ತಾರೆ ಎನ್ನುವ ವಿಚಾರ ಎಲ್ಲಡೆಯಿಂದ ಕೇಳಿ ಬಂದಿತು. ಅದಕ್ಕೆ ಇದೀಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾನಾಗಿಯೇ ಯಾರ ಮನೆ ಬಾಗಿಲಿಗೆ ಹೋಗಿಲ್ಲ. ಆಹ್ವಾನ ನೀಡಿದ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳು ಎಂದರು.
ನಮ್ಮ ಮನೆಯಲ್ಲಿ ನಡೆದ ಕಹಿ ಘಟನೆಯಿಂದ ನಾನು ಕಳೆದ ಐದಾರು ತಿಂಗಳಿನಿಂದ ರಾಜಕೀಯದಿಂದ ದೂರ ಉಳಿದಿದ್ದೆ. ಹೀಗಾಗಿ ನನ್ನ ಬಗ್ಗೆ ಊಹಾಪೋಹ ಎಬ್ಬಿಸಿದ್ದರು. ಆದರೆ ನಾನು ಬಿಜೆಪಿ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಜಗದೀಶ್ ಶೆಟ್ಟರ್ ವಾಪಸ್ ಬಂದಿದ್ದರಿಂದ ದೊಡ್ಡ ಶಕ್ತಿ ಬಂದಂತಾಗಿದೆ. ಪಕ್ಷ ಬಿಟ್ಟು ಹೋದವರನ್ನು ಕರೆ ತರುವ ಪ್ರಯತ್ನ ನಡೆದಿದೆ ಎನ್ನುವ ಮೂಲಕ ಶಾಸಕ ಲಕ್ಷ್ಮಣ ಸವದಿ ಬಗ್ಗೆಯೂ ಸುಳಿವು ನೀಡಿದ್ದಾರೆ. ಮುಂದೆ ಏನಾಗುತ್ತೆ ಕಾದು ನೋಡಬೇಕು.