ಬೆಂಗಳೂರು: ತಮ್ಮ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಮಾಜಿ ಸಚಿವ ತನ್ವೀರ್ ಸೇಠ್ ಪೊಲೀಸರಿಗೆ ಪತ್ರ ಬರೆದಿದ್ದು, ತಮ್ಮ ಹತ್ಯೆಗೆ ಸಂಚು ರೂಪಿಸಿದವರನ್ನ ಪತ್ತೆ ಹಚ್ಚುವಂತೆ ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದು, ತಮ್ಗೆ ನ್ಯಾಯ ಕೊಡಿಸಿ ಎಂದು ಕೇಳಿದ್ದಾರೆ.
ನನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಬಂಧಿಸಲಾಗಿದೆ. ಆದ್ರೆ, ಇದರ ಹಿಂದೆ ಇರುವವರು ಯಾರು ಅನ್ನೋದು ಪೊಲೀಸ್ರು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದಾರೆ. ಈ ಪ್ರಕರಣವನ್ನ ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ಸೂಕ್ತ ತನಿಖೆಯಾಗಿ ನ್ಯಾಯ ಸಿಗಬೇಕು ಎಂದಿದ್ದಾರೆ.
ಕಳೆದ ನವೆಂಬರ್ 18 ರಂದು ಮೈಸೂರಿನ ಬನ್ನಿಮಂಟಪದಲ್ಲಿ ಆಯೋಜಿಸಿದ್ದ ಮದ್ವೆ ಸಮಾರಂಭದಲ್ಲಿ ಮಾಜಿ ಸಚಿವ ತನ್ವಿರ್ ಸೇಠ್ ಭಾಗವಹಿಸಿದ್ರು. ಆಗ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿತ್ತು. ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಲಾಗಿತ್ತು. ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದಿರುವ ಅವರು, ಇದೀಗ ರಾಜ್ಯ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.