ಜೈಲಿನಿಂದ ಹೊರ ಬರುತ್ತಲೇ ವಿನಯ ಕುಲಕರ್ಣಿ ಸೇರಿ 200 ಜನರ ವಿರುದ್ಧ ಕೇಸ್

328

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಕೇಸ್ ಪ್ರಕರಣ ಸಂಬಂಧ 6 ತಿಂಗಳಿನಿಂದ ಹಿಂಡಲಗಾ ಜೈಲಿನಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಇಂದು ಷರತ್ತು ಬದ್ಧ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾದರು.

ಹೀಗೆ ಬಿಡುಗಡೆಯಾದ ಮಾಜಿ ಸಚಿವರಿಗೆ ಅವರ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ ಸಾವಿರಾರು ಸಂಖ್ಯೆ ಜನರ ನಡುವೆ ಮೆರವಣಿಗೆ ನಡೆಸಿ ಸ್ವಾಗತಿಸಲಾಗಿದೆ. ಈ ಮೂಲಕ ಕರೋನಾ ಮಾರ್ಗಸೂಚಿ ಉಲ್ಲಂಘನೆ ಹಾಗೂ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಸೇರಿ 200 ಜನರ ವಿರುದ್ಧ ಕೇಸ್ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!