ಪ್ರಜಾಸ್ತ್ರ ಸುದ್ದಿ
ಧಾರವಾಡ: ಕಾಂಗ್ರೆಸ್ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನ ವಜಾ ಮಾಡಲಾಗಿದೆ. ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದ ಯೋಗೇಶಗೌಡ ಹತ್ಯೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಇವರ ಜಾಮೀನು ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ ಕುಲಕರ್ಣಿ ಅವರು, ಹೈಕೋರ್ಟ್, ಸಿಬಿಐ ವಿಶೇಷ ಕೋರ್ಟ್ ಸಹ ಹೋಗಿದ್ದರು. ಅಲ್ಲಿ ಜಾಮೀನು ಸಿಗದೆ ಹೋದಾಗ ಜನಪ್ರತಿನಿಧಿಗಳ ಕೋರ್ಟ್ ಮೊರೆ ಹೋಗಿದ್ದರು. ಅಲ್ಲೂ ಅರ್ಜಿ ವಜಾಗೊಂಡಿದೆ. ಹೀಗಾಗಿ ಮಾಜಿ ಸಚಿವರಿಗೆ ತೀವ್ರ ನಿರಾಸೆಯಾಗಿದೆ.