ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆರ್ ಎಸ್ಎಸ್ ಕಚೇರಿ ವಿಚಾರವಾಗಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಸ್ಪಷ್ಟನೆ ನೀಡಿದೆ. ಆರ್ ಎಸ್ಎಸ್ ಕಚೇರಿ, ಸ್ಮಾರಕದ ಕಟ್ಟಡಗಳಿಗೆ ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ತಿಳಿಸಲಾಗಿದೆ.
ಈ ಬಗ್ಗೆ ಆರ್ ಎಸ್ಎಸ್ ದಕ್ಷಿಣಮಧ್ಯಕ್ಷೇತ್ರಿಯ ಕಾರ್ಯನಿರ್ವಾಹಕ ನಾ.ತಿಪ್ಪೇಸ್ವಾಮಿ ಪತ್ರಿಕಾ ಪ್ರಕಟಣೆ ನೀಡಿದ್ದು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿಕೆಯಲ್ಲಿ ಹುರುಳಿಲ್ಲ. ನಗರದಲ್ಲಿರುವ ಸಂಘದ ಕಾರ್ಯಾಲಯ ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಎಲ್ಲ ಜಾತಿ, ವರ್ಗದ ಜನರು ನಿತ್ಯ ಬಂದು ಹೋಗುತ್ತಾರೆ. ಯಾರನ್ನೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನಾಗ್ಪುರದ ಆರ್ ಎಸ್ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಜಾತಿ ಕಾರಣಕ್ಕೆ ಹೆಡಗೇವಾರ್ ವಸ್ತುಸಂಗ್ರಹಾಲಯಕ್ಕೆ ಪ್ರವೇಶ ನೀಡಿಲ್ಲ ಎಂದು ಹೇಳಿದ್ದಾರೆ. ಆಡಿಯೋ ರೂಪದ ಹೇಳಿಕೆಯನ್ನು ಸೋಷಿಯಲ್ ಮೀಡಿಯಾ, ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.