ಮಾಜಿ ಶಾಸಕ ನಾಗನಗೌಡ ಕಂದಕೂರ ನಿಧನ

121

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕ ನಾಗನಗೌಡ ಕುಂದಕೂರ ಹೃದಯಾಘಾತದಿಂದ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ. 73 ವರ್ಷದ ಕುಂದಕೂರ ನಿವಾಸದಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಉಳಿಯಲಿಲ್ಲ ಎಂದು ಹೇಳಲಾಗಿದೆ.

ವಯಸ್ಸಿನ ಕಾರಣದಿಂದ ಕಳೆದ ಚುನಾವಣೆಯಲ್ಲಿ ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ಇವರ ಪುತ್ರ ಶರಣಗೌಡ ಕುಂದಕೂರ 2023ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮೃತ ನಾಗನಗೌಡ ಕಂದಕೂರ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!