ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಹಜ. ಜನಾದೇಶಕ್ಕೆ ತಲೆ ಬಾಗುತ್ತೇನೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಗೆದ್ದವರಿಗೆ ಅಭಿನಂದನೆಗಳು. ಉಪ ಚುನಾವಣೆಯ ಬಳಿಕ ಅಲ್ಪಾವಧಿಯಲ್ಲಿ ಹಲವಾರು ಕೆಲಸ ಮಾಡಿದ್ದೇನೆ. ನನ್ನ ಅವಧಿಯಲ್ಲಿ ತಂದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲಿ ಎಂದರು.
ಚುನಾವಣೆ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರು, ಬೆಂಬಲಿಗರು ಶಕ್ತಿಮೀರಿ ಕೆಲಸ ಮಾಡಿದ್ದಾರೆ. 79 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ಕೃತಜ್ಞತೆಗಳು. ಸೋಲಿನಿಂದ ಧೃತಿಗೆಡದೆ ಜನರ ಮಧ್ಯದಲ್ಲಿದ್ದುಕೊಂಡು ಪಕ್ಷ ಹಾಗೂ ಕ್ಷೇತ್ರದ ಕೆಲಸ ಮಾಡುತ್ತೇನೆ ಅಂತಾ ಹೇಳಿದರು.
ಈ ವೇಳೆ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಸಂತೋಷ ಮಣಿಗಿರ, ಮಾಧ್ಯಮ ಸಂಚಾಲಕ ಶಿವಕುಮಾರ ಬಿರಾದಾರ ಹಾಜರಿದ್ದರು.