ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿಯೇ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು(60) ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಅರ್ಜಿ ಆಹ್ವಾನಿಸಿತ್ತು. 224 ಕ್ಷೇತ್ರಗಳಿಗೆ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.
ಇಂದು ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕರೆಯಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದೂರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೀಗಾಗಿ ಈ ಸಭೆಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಟಿಕೆಟ್ ಆಕಾಂಕ್ಷಿಗಳ ಸಭೆಗೆ ಆಗಮಿಸಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಗದಗ ಜಿಲ್ಲೆಯ ರೋಣ ಹಾಗೂ ಗದಗ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಮೊದಲು ಜನತಾ ದಳದಿಂದ ಸ್ಪರ್ಧಿಸಿ ಕಾಂಗ್ರೆಸ್ ನ ಜಿ.ಎಸ್ ಪಾಟೀಲ ವಿರುದ್ಧ ಗೆದ್ದಿದ್ದರು. ಜನತಾದಳ ಇಬ್ಭಾಗವಾದಗ ಜೆಡಿಎಸ್ ಸೇರಿದರು.
1999ರಲ್ಲಿ ರೋಣದಿಂದ ಸ್ಪರ್ಧಿಸಿ ಸೋತರು. 2005ರಲ್ಲಿ ಬಿಜೆಪಿ ಸೇರಿದರು. 2008ರಲ್ಲಿ ಗದಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಚ್.ಕೆ ಪಾಟೀಲ ವಿರುದ್ಧ ಗೆದ್ದರು. ಯಡಿಯೂರಪ್ಪ ಕಟ್ಟಾ ಬೆಂಬಲಗರಾಗಿದ್ದ ಶ್ರೀಶೈಲಪ್ಪ ಕೆಜಿಪಿ ಸೇರಿದ್ದರು. ನಂತರ ಬಿಜೆಪಿಗೆ ಬಂದರು. 2018ರಲ್ಲಿ ಬಿಜೆಪಿ ಟಿಕೆಟ್ ನೀಡದೆ ಇದ್ದಾಗ ಕಾಂಗ್ರೆಸ್ ಸೇರಿದ್ದರು. ಈ ಬಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.