ಪ್ರಜಾಸ್ತ್ರ ಸುದ್ದಿ
ಉತ್ತರ ಕನ್ನಡ: ಯಲ್ಲಾಪುರದ ಮಾಜಿ ಶಾಸಕ ವಿ.ಎಸ್ ಪಾಟೀಲ, ಜಿಲ್ಲಾ ಬಿಜೆಪಿ ನಾಯಕರಾಗಿದ್ದ ಶ್ರೀನಿವಾಸ್ ಭಟ್, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.
ಈ ಮೂಲಕ ದಕ್ಷಿಣ ಕನ್ನಡ ಭಾಗದ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸುವ ತಂತ್ರಗಳನ್ನು ಹೆಣಿಯಲಾಗುತ್ತಿದ್ದು, ಬಿಜೆಪಿ ಪಾಳೆಯದಲ್ಲಿ ಒಂದಿಷ್ಟು ಟೆನ್ಷನ್ ಕೊಡುವ ಕೆಲಸ ನಡೆದಿದೆ. ಇದಕ್ಕೆ ಕಮಲ ನಾಯಕರು ಹೇಗೆ ಉತ್ತರಿಸುತ್ತಾರೆ ಕಾದು ನೋಡಬೇಕಿದೆ.