Search

ಪರೀಕ್ಷೆ ಭಯ: ಪಿಯು ವಿದ್ಯಾರ್ಥಿನಿ ಸೂಸೈಡ್!

409

ಮೈಸೂರು: ಪರೀಕ್ಷೆಗೆ ಸರಿಯಾಗಿ ಓದಿಲ್ಲವೆಂದು ನೊಂದುಕೊಂಡಿದ್ದ ವಿದ್ಯಾರ್ಥಿನೋರ್ವಳು ನೇಣಿಗೆ ಶರಣಾದ ಘಟನೆ ನಂಜನಗೂಡು ತಾಲೂಕಿನ ಬಿಳಗಲಿ ಗ್ರಾಮದಲ್ಲಿ ನಡೆದಿದೆ. 18 ವರ್ಷದ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡ್ತಿದ್ದ, ನಾಗಯ್ಯ ಎಂಬುವರ ಮಗಳು ಪರೀಕ್ಷೆಗೆ ಸರಿಯಾಗಿ ಓದಿಲ್ಲವೆಂದು ಮನೆಯವರ ಮುಂದೆ ಹಲವು ಬಾರಿ ಹೇಳಿಕೊಂಡಿದ್ದಳಂತೆ. ಪರೀಕ್ಷೆಯ ಭಯಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 7ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.




Leave a Reply

Your email address will not be published. Required fields are marked *

error: Content is protected !!