ಪ್ರಜಾಸ್ತ್ರ ಸುದ್ದಿ
ಚೆನ್ನೈ: ಮೊನ್ನೆ ಶನಿವಾರ ಕರ್ನಾಟಕ ತಮಿಳುನಾಡು ಗಡಿ ಭಾಗವಾದ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಬೆಂಕಿ ಅನಾಹುತ ಸಂಭವಿಸಿ 14 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಚೆನ್ನೈನಲ್ಲಿ ಪಟಾಕಿ ತಯಾರಿಕ ಘಟಕದಲ್ಲಿ ಸ್ಫೋಟವಾಗಿದೆ.
ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರು ವೀರಗಾಲೂರಿನಲ್ಲಿ ಪಟಾಕಿ ತಯಾರಿಕ ಘಟಕದಲ್ಲಿ ಸ್ಫೋಟ ಸಂಭವಿಸಿ 10 ಕಾರ್ಮಿಕರು ಮೃತಪಟ್ಟಿದ್ದಾರೆ. ಇದರಲ್ಲಿ ಇಬ್ಬರ ಮೃತದೇಹದ ಗುರುತು ಮಾತ್ರ ಪತ್ತೆಯಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.