ಪ್ರಜಾಸ್ತ್ರ ಸುದ್ದಿ
ಹೊಸಪೇಟೆ: ಎಸಿ ಸ್ಫೋಟಗೊಂಡ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ. ವೆಂಕಟೇಶ್ ಪ್ರಶಾಂತ್(42), ಪತ್ನಿ ಚಂದ್ರಕಲಾ(38), ಮಕ್ಕಳಾದ ಅರ್ದ್ವಿಕ್(16) ಹಾಗೂ ಪ್ರೇರಣಾ(8) ಮೃತ ದುರ್ದೈವಿಗಳು.
ಇಂದು ಬೆಳಗಿನ ಜಾವ ಈ ದುರಂತ ಸಂಭವಿಸಿದೆ. ರಾಘವೇಂದ್ರ ಶೆಟ್ಟಿ ಎಂಬುವರ ಮನೆಯಲ್ಲಿ ಅನಾಹುತ ಸಂಭವಿಸಿದೆ. ರಾಘವೇಂದ್ರ ಹಾಗೂ ಪತ್ನಿ ರಾಜಶ್ರೀ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ, ವೆಂಕಟೇಶ್ ಕುಟುಂಬ ಹೊರ ಬರಲಾಗದೆ ಮೃತಪಟ್ಟಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೊಗೆಯಿಂದೋ ಅಥವ ಅನಿಲ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೋ ಅನ್ನೋದರ ಕುರಿತು ತನಿಖೆ ನಡೆಸಲಾಗುತ್ತಿದೆ.