ಪ್ರಜಾಸ್ತ್ರ ಸುದ್ದಿ
ಸಿಂದಗಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನಕಲು ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕ ಹಾಗೂ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಕೆಲ ಮಾಧ್ಯಮಗಳಲ್ಲಿ ಜನತೆಯ ಕ್ಷಮೆ ಸಹ ಕೇಳಿದ್ದಾರೆ.
ಈಗಾಗ್ಲೇ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಸಂಬಂಧಪಟ್ಟ ಇಲಾಖೆಗೆ ಮುಂದಿನ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಇದರ ನಡುವೆ ಜಯ ಕರ್ನಾಟಕ ಸಂಘಟನೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಸಿದ್ಧಲಿಂಗ ಚೌಧರಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದೆ.
ಇನ್ನು ಈ ಪ್ರಕರಣದ ಬಗ್ಗೆ ಹೋರಾಟ ಮಾಡಿಕೊಂಡು ಬರ್ತಿರುವ ಸಾಕ್ಷ್ಯಚಿತ್ರ ನಿರ್ದೇಶಕ ಚಂದ್ರಕಾಂತ ಸೊನ್ನದ, ಜನತೆಯ ಕ್ಷಮೆ ಕೇಳಿರುವುದು ಒಳ್ಳೆಯದು. ಅದೆ ರೀತಿ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅನ್ನೋ ಆಗ್ರಹ ಮಾಡಿದ್ದಾರೆ. ಇದಕ್ಕೆ ತಾಲೂಕಿನ ಹಿರಿಯ ಸಾಹಿತಿಗಳು ಬೆಂಬಲ ಸೂಚಿಸಿದ್ದಾರೆ.