ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ನಂಬಿಕೆ ಇಟ್ಟುಕೊಂಡಿರುವುದು ಮುಸ್ಲಿಂ ವೋಟಗಳನ್ನು. ಹಿಂದುಗಳ ವೋಟುಗಳನ್ನು ನಂಬಿಕೊಂಡಿಲ್ಲ. ಪಕ್ಷದ ಚಿನ್ಹೆಯನ್ನು ಹಿಂದಿನ ಕಾಂಗ್ರೆಸ್ ನಾಯಕರು ಬದಲಾಯಿಸಿದ್ದಾರೆ. ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಖಾಸಗಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನುವ ಸುದ್ದಿಯನ್ನು ಹಬ್ಬಿಸಲಾಗಿದೆ. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ-ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾ ಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈಗಾಗ್ಲೇ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೆಳಗೆ ಒಪ್ಪಿಸಲಾಗುವುದು ಎಂದಿದ್ದಾರೆ.