ಸುಳ್ಳು ಜಾಹೀರಾತು, ಸುಪ್ರೀಂನಲ್ಲಿ ಪತಂಜಲಿ ಕ್ಷಮೆ

68

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪತಂಜಲಿ ಆಯರ್ವೇದ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಸುಳ್ಳು ಜಾಹೀರಾತು ನೀಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಬೇಷರತ್ತು ಕ್ಷಮೆ ಕೇಳಿದೆ. ಪತಂಜಲಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅಫಿಡವಿಟ್ ಮೂಲಕ ಕ್ಷಮೆ ಕೇಳಿದ್ದಾರೆ.

ಮುಂದಿನ ದಿನಗಳಲ್ಲಿ ಈ ಬಗ್ಗೆ ಜಾಹೀರಾತು ಪ್ರಕಟಿಸುವುದಿಲ್ಲ ಎಂದು ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಕೋರ್ಟ್ ನೋಟಿಸ್ ಗೆ ಉತ್ತರ ನೀಡಿರಲಿಲ್ಲ. ಹೀಗಾಗಿ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣಗೆ ಖುದ್ದು ಹಾಜರಾಗುವಂತೆ ಸೂಚಿಸಲಾಗಿತ್ತು.




Leave a Reply

Your email address will not be published. Required fields are marked *

error: Content is protected !!