ಪ್ರಜಾಸ್ತ್ರ ಸುದ್ದಿ
ನವದೆಹಲಿ: ನೂತನ ರಾಷ್ಟ್ರಪತಿ ಆಯ್ಕೆ ಸಂಬಂಧ ಚುನಾವಣೆ ಘೋಷಣೆಯಾಗಿದೆ. ಪ್ರಸ್ತುತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಮುಗಿಯಲಿದೆ. ಹೀಗಾಗಿ ಮುಂದಿನ ವಾರದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿದೆ.
ಇನ್ನು ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣದಲ್ಲಿದ್ದಾರೆ. ಜುಲೈ 18ರಂದು ಚುನಾವಣೆ ನಡೆಯಲಿದೆ. ಪಕ್ಷಗಳ ಬಲಾಬಲ ಹಾಗೂ ಯಾವೆಲ್ಲ ಪಕ್ಷಗಳು ಯಾರಿಗೆ ಬೆಂಬಲ ನೀಡುತ್ತಿದ್ದಾರೆ ಅನ್ನೋದು ನೋಡಿದರೆ ಎನ್ ಡಿಎ ಅಭ್ಯರ್ಥಿ ಮುರ್ಮು ಗೆಲುವುದು ಪಕ್ಕಾ ಎನ್ನಬಹುದು.